ಚಾಮರಾಜನಗರ: ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ಬಿಳಿ ಬಣ್ಣದ ಕಾರೊಂದು ನಾಲ್ಕು ಕುರಿಗಳಿಗೆ ಅಪಘಾತ ಮಾಡಿ ಪರಾರಿಯಾಗಿದೆ.
ತಾಲೂಕಿನ ಉತ್ತುವಳ್ಳಿ ಗ್ರಾಮದ ನಿವಾಸಿಯೊಬ್ಬರು ಫ್ಯಾಕ್ಟರಿ ಮುಂಭಾಗ ಕುರಿಗಳನ್ನು ಮೇಯಿಸಲು ಹೋಗುವಾಗ ಚಾಮರಾಜನಗರ ದಿಂದ ಗುಂಡ್ಲುಪೇಟೆ ಕಡೆಗೆ ಹೋಗುವ ಬಿಳಿಬಣ್ಣದ ಕಾರೊಂದು 4 ಕುರಿಗಳಿಗೆ ಅಪಘಾತ ಮಾಡಿ ಹೋಗಿರುತ್ತದೆ. ಈ ವಿಚಾರವನ್ನು ಗೋವಿಂದರಾಜು ಎಂಬುವವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದರು.
ಪೊಲೀಸರು ತಕ್ಷಣ ಗುಂಡ್ಲುಪೇಟೆ-ಚಾಮರಾಜನಗರ ಮುಖ್ಯರಸ್ತೆಯಲ್ಲಿರುವ ವಿವಿಧ ಸಿಸಿಟಿವಿ ಗಳನ್ನು ಪರಿಶೀಲಿಸಿದ್ದು, ಯಾವುದೇ ಉಪಯುಕ್ತ ವಾದ ಮಾಹಿತಿ ಲಭ್ಯವಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಕುರಿಗಳ ಮಾಲೀಕರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಜನತಾ ರಾಯಭಾರಿಗೆ ಲಭ್ಯವಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.