ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಾವು ಮತ್ತು ಅಧಿಕಾರಿಗಳು ಒಟ್ಟಿಗೆ ಸೇರಿ ಸಮರ್ಪಕವಾಗಿ ಕೆಲಸ ಮಾಡಬೇಕಿದ್ದು ಅಧಿಕಾರಿಗಳು ಸಭೆಗೆ ಸುಳ್ಳು ಮಾಹಿತಿಗಳನ್ನು ನೀಡಬಾರದು ಎಂದು ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಹೆಚ್ಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವರದಿಯಾಗುತ್ತಿದೆ. ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಭೆಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಬಾರದು ಎಂದು ಸಭೆಗೂ ಮುನ್ನವೇ ಸಚಿವ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು
.