ಗುಂಡ್ಲುಪೇಟೆ: ತಾಲೂಕಿನ ಬೇಗೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಲಾರಿ ಮತ್ತು ಗೂಡ್ಸ್ ಆಟೋ ನಡುವೆ ಅಪಘಾತವಾಗಿದ್ದು, ಗೂಡ್ಸ್ ಆಟೋ ಚಾಲಕನಿಗೆ ಗಂಭೀರ ಗಾಯವಾಗಿದೆ.
ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಬಸ್ ನಿಲ್ದಾಣದ ಸಮೀಪದ ಲಾರಿ ಮತ್ತು ಗೂಡ್ಸ್ ಆಟೋ ನಡುವೆ ಅಪಘಾತವಾಗಿದ್ದು, ಗೂಡ್ಸ್ ಆಟೋ ಚಾಲಕನಿಗೆ ಗಂಭೀರ ಗಾಯವಾಗಿದೆ.
ಸದ್ಯ ಬೇಗೂರು ಪೊಲೀಸ್ ಠಾಣೆಯ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಮೈಸೂರು ಆಸ್ಪತ್ರೆಗೆ ರವಾನಿಸಿದ್ದಾರೆ.